Actor Darshan: ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಟ್ರಯಲ್ ಆರಂಭ; ಜೈಲಿನಿಂದಲೇ ಭಾಗಿಯಾದ ದರ್ಶನ್, ಪವಿತ್ರಾ ಗೌಡ
ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ತನಿಖೆ ಇಂದಿನಿಂದ ಮಹತ್ವದ ಹಂತಕ್ಕೆ ತಲುಪಿದೆ. ನಟ ದರ್ಶನ್, (Actor Darshan) ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ಅಧಿಕೃತ ಕೋರ್ಟ್ ವಿಚಾರಣೆ (ಟ್ರಯಲ್) ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಇಂದಿನಿಂದ ಚಾಲನೆ ಪಡೆದುಕೊಂಡಿದೆ. ಬೆಂಗಳೂರಿನ ಸಿಸಿಹೆಚ್-59 ನ್ಯಾಯಾಲಯದ ಪ್ರಮುಖ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರ ನೇತೃತ್ವದಲ್ಲಿ ಇಂದಿನ ಕಲಾಪ ಜರುಗಿತು. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ನ್ಯಾಯಾಲಯದಿಂದ…
