Road Mishap: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ದುರ್ಮರಣ, ನಾಲ್ವರು ಶಿಕ್ಷಣಾಧಿಕಾರಿಗಳ ಸ್ಥಿತಿ ಗಂಭೀರ
ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಇಂದು ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಇಲಾಖೆಯ ಉನ್ನತ ಮಟ್ಟದ ಸಭೆಗೆ ಹಾಜರಾಗಲು ಮೈಸೂರಿನಿಂದ ಬೆಂಗಳೂರಿನತ್ತ ಧಾವಿಸುತ್ತಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳಿದ್ದ ವಾಹನವು ಚನ್ನಪಟ್ಟಣದ ಮುದುಗೆರೆ ಸಮೀಪ ಭೀಕರ ಅಪಘಾತಕ್ಕೆ (Road Mishap) ಈಡಾಗಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ತನೆ ಸಿಡಿದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆನಂದ್ ಎಂಬುವವರೇ ಮೃತಪಟ್ಟ ದುರ್ದೈವಿ ಚಾಲಕ. ಕಾರಿನಲ್ಲಿದ್ದ ಮೈಸೂರು ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಪ್ರಕಾಶ್, ರಾಜು, ಕೃಷ್ಣ ಹಾಗೂ…
