Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್ಗೂ ಹೆಚ್ಚು ದೂರ ಬೈಕ್ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…
