BJP: ಹಿಜಾಬ್ ಬಂದರೆ ಕೇಸರಿ ಶಾಲೂ ಬಂದೇ ಬರುತ್ತೆ, ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab) ಮೇಲಿದ್ದ ನಿರ್ಬಂಧವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಿರ್ಧಾರವು ಶಾಲಾ ಆವರಣದಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಕದಡಲಿದೆ ಎಂದು ಆಪಾದಿಸಿರುವ ಬಿಜೆಪಿ ನಾಯಕರು, ಒಂದು ಸಮುದಾಯಕ್ಕೆ ವಿಶೇಷ ರಿಯಾಯಿತಿ ನೀಡಿದರೆ ಹಿಂದೂ ವಿದ್ಯಾರ್ಥಿಗಳೂ ಕೇಸರಿ ಶಾಲು ಧರಿಸಿ ಬರಲು ಅನುಮತಿ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸಿ.ಟಿ. ರವಿ ಕಿಡಿ: “ಸಮವಸ್ತ್ರದ ಪರಿಕಲ್ಪನೆಗೆ ಧಕ್ಕೆ” ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಕಿಡಿಕಾರಿದ ವಿಧಾನಪರಿಷತ್…
