Breaking News: ಜೈಲಿನಲ್ಲಿಯೇ ಕೊನೆಯುಸಿರೆಳೆದ ಸಿಖ್ ವಿರೋಧಿ ದಂಗೆಯ ಪ್ರಮುಖ ರೂವಾರಿ ಸಜ್ಜನ್ ಕುಮಾರ್!
ನವದೆಹಲಿ: 1984ರ ಭೀಕರ ಸಿಖ್ ವಿರೋಧಿ ದಂಗೆ ಪ್ರಕರಣದ ಪ್ರಮುಖ ಅಪರಾಧಿ ಹಾಗೂ ಕಾಂಗ್ರೇಸ್ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ (Breaking News) ನಿಧನರಾಗಿದ್ದಾರೆ. ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅವರಿಗೆ ದಿಢೀರ್ ಆರೋಗ್ಯ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಖ್ ವಿರೋಧಿ ಹಿಂಸಾಚಾರದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಸೂತ್ರಧಾರಿ 1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ…
