SDPI: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ
ಮೈಸೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಎಸ್ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತೀವ್ರ…
