KPSC: ನೀವು ಯಾವ ಮಟ್ಟಕ್ಕಾದರೂ ಇಳಿಯಬಲ್ಲಿರಿ: ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಹೈಕೋರ್ಟ್ ಗರಂ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ಗೆ ಉನ್ನತ ನ್ಯಾಯಾಲಯದಿಂದ ಭಾರೀ ಹಿನ್ನಡೆಯಾಗಿದೆ. ತಮ್ಮ ಬಂಧನ ಭೀತಿಯಿಂದ ಪಾರಾಗಲು ಸಾಹುಕಾರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸಂಪೂರ್ಣವಾಗಿ ವಜಾಗೊಳಿಸಿ ಆದೇಶಿಸಿದೆ. ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಹೈಕೋರ್ಟಿನ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಮಹತ್ವದ ತೀರ್ಪು ಪ್ರಕಟಿಸಿದೆ….
