TOP NEWS
Congress CPL meeting dk shivakumar meets siddaramaiah

Congress: ಪರಿಷತ್ ಚುನಾವಣೆ ತಲ್ಲಣ: ಸಿಎಲ್‌ಪಿ ಸಭೆಗೂ ಮುನ್ನ ಸಿದ್ದರಾಮಯ್ಯ ನಿವಾಸಕ್ಕೆ ಸಿಎಂ ಡಿಕೆಶಿ ದಿಢೀರ್ ಭೇಟಿ, ರಹಸ್ಯ ಸಮಾಲೋಚನೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ರೋಮಾಂಚನ ಮೂಡಿಸಿರುವ ವಿಧಾನ ಪರಿಷತ್ ಚುನಾವಣೆಯ ಮುಹೂರ್ತ ಹತ್ತಿರವಾಗುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ತಂತ್ರ-ಪ್ರತಿತಂತ್ರಗಳ ಜಿದ್ದಾಜಿದ್ದಿ ತಾರಕಕ್ಕೇರಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಿರ್ಣಾಯಕ ಸಭೆ ಆರಂಭವಾಗುವ ಕೆಲವೇ ಗಂಟೆಗಳ ಮುಂಚೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ‘ಕಾವೇರಿ’ಗೆ ಸರ್ಪ್ರೈಸ್ ಭೇಟಿ ನೀಡಿರುವುದು ಭಾರಿ ರಾಜಕೀಯ ಸಂಚಲನ ಮೂಡಿಸಿದೆ. ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ನಡುವೆ ನಡೆದಿರುವ ಈ ಆಂತರಿಕ ಮಾತುಕತೆ…

Read More
Siddaramaiahs ahinda team facing big problem

Siddaramaiah: ಸಿದ್ದರಾಮಯ್ಯ ಅವರ ‘ಅಹಿಂದ’ ಭದ್ರಕೋಟೆಗೆ ಬಿರುಕು: ಮೂಲ ಕಾಂಗ್ರೆಸ್ಸಿಗರ ಪ್ರಾಬಲ್ಯಕ್ಕೆ ನಾಯಕರು ಕಂಗಾಲು!

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಶಕಗಳ ಕಾಲ ಬೆನ್ನೆಲುಬಾಗಿ ನಿಂತಿದ್ದ ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತ) ಒಕ್ಕೂಟದಲ್ಲಿ ಇದೀಗ ಭಾರಿ ಬಿರುಕು ಕಾಣಿಸಿಕೊಂಡಿದೆ. ಸಿದ್ದರಾಮಯ್ಯ (Siddaramaiah) ಅವರ ಬಣದಲ್ಲೇ ಗುರುತಿಸಿಕೊಂಡು ರಾಜಕೀಯವಾಗಿ ಮುಂಚೂಣಿಯಲ್ಲಿದ್ದ ಪ್ರಮುಖ ಅಹಿಂದ ಮುಖಂಡರು, ಪ್ರಸ್ತುತ ರಾಜಕಾರಣದಲ್ಲಿ ತಮಗೆ ಸೂಕ್ತ ಮನ್ನಣೆ ಹಾಗೂ ಅಧಿಕಾರದ ಸ್ಥಾನಮಾನಗಳು ಸಿಗುತ್ತಿಲ್ಲ ಎಂಬ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದಾರೆ. ಈ ನಾಯಕರು ಸಿದ್ದು ಬಣದಿಂದ ದೂರ ಸರಿಯುತ್ತಿರುವುದು ಮತ್ತು ಪರ್ಯಾಯ ದಾರಿಗಳತ್ತ…

Read More
Siddaramaiah promises regarding guarantee scheme

Siddaramaiah: ಐದು ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಲೋಪದೋಷ ಸರಿಪಡಿಸಲು ಸಿದ್ದರಾಮಯ್ಯ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಂದಿನ ಎರಡು ವರ್ಷಗಳು ಮಾತ್ರವಲ್ಲದೆ, ಮುಂಬರುವ ಚುನಾವಣೆಯಲ್ಲೂ ನಾವು ಮತ್ತೆ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲಿದ್ದೇವೆ ಹಾಗೂ ಆ ಬಳಿಕವೂ ಈ ಯೋಜನೆಗಳು ಮುಂದುವರಿಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆ ಮೊದಲಿನಿಂದಲೂ ನಡೆಯುತ್ತಿದ್ದು, ಈಗಲೂ ಅದು ಮುಂದುವರಿದಿದೆ. ಹೀಗಾಗಿ ಫಲಾನುಭವಿಗಳು ವಿರೋಧ ಪಕ್ಷಗಳ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗುವ…

Read More
Siddaramaiah clarification about partiality in grants

Siddaramaiah: ಸಮುದಾಯ ಭವನ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ: ವಿರೋಧಿಗಳ ಆರೋಪಕ್ಕೆ ಅಂಕಿ-ಅಂಶಗಳ ಸಮೇತ ಸಿದ್ದರಾಮಯ್ಯ ತಿರುಗೇಟು!

ಬೆಂಗಳೂರು: ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಗ್ರ್ಯಾಂಟ್ ರಿಲೀಸ್ ಮಾಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ದೂರುಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಇಲಾಖೆಯಿಂದ ಸದ್ಯ ಹೊರಬಿದ್ದಿರುವ ಆರ್ಡರ್ ಕೇವಲ ಆರಂಭಿಕ ಹಂತದ ಪೂರ್ವಭಾವಿ ಮಂಜೂರಾತಿಯಾಗಿದೆಯೇ ಹೊರತು, ಇದು ಅಂತಿಮವಾಗಿ ಹಣ ಬಿಡುಗಡೆ ಮಾಡುವ ಲಿಸ್ಟ್ ಅಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರದ ನಿಯಮಾವಳಿಗಳು ಮತ್ತು ಮೀಸಲಾತಿ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸಿಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯ ಅಥವಾ ಉದ್ದೇಶಪೂರ್ವಕ…

Read More
siddaramaiah slams bjp and election commission rajya sabha election

Siddaramaiah: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: “ದೇಶದ ಪ್ರಜಾಪ್ರಭುತ್ವದ ಆಶಯಗಳನ್ನು ಹೊಸಕಿ ಹಾಕಿ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಆಡಳಿತವನ್ನು ಬಿಜೆಪಿ ಸಂಭ್ರಮಿಸುತ್ತಿರುವುದು ದೇಶದ ವ್ಯವಸ್ಥೆಗೆ ಮಾಡಿದ ದೊಡ್ಡ ಅವಮಾನ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ (Siddaramaiah) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಮೀನಾಕ್ಷಿ ನಟರಾಜನ್‌ ಅವರ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಖಂಡಿಸಿ ಅವರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಪತ್ರಿಕಾ…

Read More
R Ashok accuse congress for Zameer viral audio

R Ashok: ಕಾಂಗ್ರೆಸ್‌ ಒಳಜಗಳಕ್ಕೆ ಡಿಕೆಶಿ ಬಲಿ, ಸಿದ್ದರಾಮಯ್ಯ ಕೊಟ್ಟ ಹಳೇ ಬಸ್ಸಿಗೆ ಡೀಸೆಲ್‌ ಕೂಡ ಇಲ್ಲ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…

Read More
siddaramaiah becomes emotional after resignation

Siddaramaiah: ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾವುಕರಾದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸುದೀರ್ಘ ಹಾಗೂ ರೋಚಕ ರಾಜಕೀಯ ಪಯಣವನ್ನು ಅತ್ಯಂತ ಭಾವುಕರಾಗಿ ಮೆಲುಕು ಹಾಕಿದ್ದಾರೆ. ತಮಗೆ ರಾಜಕೀಯ ಆಶ್ರಯ ನೀಡಿ ಬೆಳೆಸಿದ ಕಾಂಗ್ರೆಸ್ ಪಕ್ಷ, ಹೈಕಮಾಂಡ್ ನಾಯಕರು ಮತ್ತು ತಮ್ಮ ಆಡಳಿತಾವಧಿಯಲ್ಲಿ ಸಾಥ್ ನೀಡಿದ ಸಹೋದ್ಯೋಗಿಗಳಿಗೆ ಸದಾ ಚಿರಋಣಿಯಾಗಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ತಾವು ಕಾಂಗ್ರೆಸ್ ಸೇರಿದ ದಿನಗಳನ್ನು ನೆನಪಿಸಿಕೊಂಡ ಅವರು, ನಾನು 2006 ರಲ್ಲಿ ಕಾಂಗ್ರೆಸ್ ಪಕ್ಷವನ್ನು…

Read More