Crime: ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಯುವಕ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು!
ಸಾಗರ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆಂದು ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ (Crime)ಯುವಕನೊಬ್ಬ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಆಂಧ್ರಪ್ರದೇಶದ ರಾಯದುರ್ಗ ನಿವಾಸಿಯಾದ ಉಮೇಶ್ (೩೦) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿದ್ದ ಯುವಕ ಬುಧವಾರ ಮಧ್ಯಾಹ್ನ ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲೆಂದು ನೀರಿನಲ್ಲಿ ಇಳಿದಿದ್ದ ಉಮೇಶ್, ದಿಢೀರನೆ ನೀರಿನ ಸೆಳತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ…
