TOP NEWS
Voter List Cleanup in Karnataka 19 Voters Under ASDDO Category First Draft Out on August 24 SIR

SIR: ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 1.08 ಕೋಟಿ ಮತದಾರರು ಎಎಸ್‌ಡಿಡಿಒ ವ್ಯಾಪ್ತಿಗೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1,08,75,304 (ಶೇ. 19) ಮತದಾರರನ್ನು ಎಎಸ್‌ಡಿಡಿಒ (ASDDO) ಅಡಿಯಲ್ಲಿ ವರ್ಗೀಕರಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆ ಅಧಿಕಾರಿಗಳು (BLO) ಮನೆ ಮನೆಗೆ ಸಮೀಕ್ಷೆಗಾಗಿ ತೆರಳಿದಾಗ ಮತದಾರರು ಸಿಗದೇ ಇದ್ದರೆ ಅವರನ್ನು ‘ಪತ್ತೆಯಾಗದವರು’ (Absent) ಎಂದೂ, ಮನೆ ಬದಲಾಯಿಸಿದ್ದರೆ ‘ಸ್ಥಳಾಂತರ’ (Shifted) ಎಂದೂ ಹಾಗೂ ಮೃತಪಟ್ಟಿದ್ದರೆ…

Read More
SIR creating problem in Bengaluru people facing issue

SIR: ಬೆಂಗಳೂರಿನ ಬದಲಾದ ಚಿತ್ರಣ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೊಂದಲ, ಸವಾಲುಗಳ ಸುಳಿ

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 24 ವರ್ಷಗಳ ನಂತರ ಅಂದರೆ 2002ರ ಬಳಿಕ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಗೊಂದಲ ಮತ್ತು ಸವಾಲುಗಳಿಗೆ ಕಾರಣವಾಗಿದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ಭೌಗೋಳಿಕ ಮತ್ತು ಜನಸಂಖ್ಯಾ ಚಿತ್ರಣ ಸಂಪೂರ್ಣವಾಗಿ ಬದಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತದಾರರು ಸೂಕ್ತ ದಾಖಲೆಗಳನ್ನು ಪತ್ತೆ ಹಚ್ಚಲು ಮತ್ತು ನಮೂನೆಗಳನ್ನು ಭರ್ತಿ ಮಾಡಲು ತೀವ್ರ ಪರದಾಡುವಂತಾಗಿದೆ. ನಗರದಲ್ಲಿ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
HD Kumaraswamy slams CM alleges voter list manipulation conspiracy in closed door review meetings

HD Kumaraswamy: ಜನರ ಕಿವಿಗೆ ಹೂ ಇಡಲು ಸಿಎಂ ಹೊರಟಿದ್ದಾರೆ; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಮುಖ್ಯಮಂತ್ರಿಗಳ ದೈನಂದಿನ ನಡವಳಿಕೆಗಳ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಭಾರಿ ವಾಗ್ದಾಳಿ ನಡೆಸಿದ್ದಾರೆ. “ಹಿಂದೆ ಕಿವಿಗೆ ಹೂ ಮುಡಿದುಕೊಂಡು ವಿಧಾನಸಭೆಗೆ ಬಂದು ಹೋರಾಟದ ನಾಟಕವಾಡಿದ್ದ ಇದೇ ನಾಯಕರು, ಈಗ ಇಡೀ ಕರ್ನಾಟಕದ ಏಳು ಕೋಟಿ ಜನಸಾಮಾನ್ಯರ ಕಿವಿಗೆ ಹೂ ಇಡಲು ಹೊರಟಿದ್ದಾರೆ” ಎಂದು ಅವರು ಲೇವಡಿ ಮಾಡಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಜಂಟಿ…

Read More
No Govt Interference in SIT Process Dr G Parameshwara

SIR: ಎಸ್‌ಐಆರ್‌ನಲ್ಲಿ ಸರ್ಕಾರದ ಕೈವಾಡವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ತುಮಕೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಭಾರತೀಯ ಚುನಾವಣಾ ಆಯೋಗದ (ECI) ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿದ್ದು, ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಗೊಂದಲ, ಬಿಎಲ್‌ಒಗಳ ಕರ್ತವ್ಯ ಲೋಪ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿವಾದದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು,…

Read More
Two parallel voter list revision surveys in Bengaluru spark confusion residents move High Court against State Election Commission over SIR

SIR: ಬೆಂಗಳೂರಿನಲ್ಲಿ ಎರಡು ಎಸ್‌ಐಆರ್ ಗೊಂದಲ: ರಾಜ್ಯ ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿವಾಸಿಗಳು

ಬೆಂಗಳೂರು: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶವೊಂದು ಈಗ ಹೈಕೋರ್ಟ್‌ ಅಂಗಳ ತಲುಪಿದೆ. ಕೇಂದ್ರ ಚುನಾವಣಾ ಆಯೋಗದ ಬೃಹತ್ ಅಭಿಯಾನದ ನಡುವೆಯೇ, ಗ್ರೇಟರ್ ಬೆಂಗಳೂರಿನ ಕೆಲವು ವಾರ್ಡ್‌ಗಳಿಗೆ ಪ್ರತ್ಯೇಕವಾಗಿ ಮತ್ತೊಂದು ಸಮಾನಾಂತರ ಪರಿಷ್ಕರಣೆ ನಡೆಸಲು ರಾಜ್ಯ ಆಯೋಗ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರ್ಯಾಯ SIR ಆದೇಶ ರದ್ದು ಮಾಡಿ ಬೆಂಗಳೂರಿನ ನಿವಾಸಿಗಳಾದ ವಿವೇಕ್ ಹಾಗೂ ಇತರರು…

Read More
You Are Being Sacrificed for Politics Protect Your Own Livelihood CM DK Shivakumar Appeal to Farmers

DK Shivakumar: ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಕುಮಾರಸ್ವಾಮಿ ಟೀಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ಆರೋಪ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಈ ಅಕ್ರಮದ ಹಿಂದೆ ಸರ್ಕಾರದ ಕೈವಾಡವಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದುವರಿಸುವುದು ಅಥವಾ ರದ್ದುಗೊಳಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯೇ ಹೊರತು ಸರ್ಕಾರದ ಕೆಲಸವಲ್ಲ ಎಂದಿರುವ ಅವರು,…

Read More