BJP: ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟಕ್ಕಾಗಿ ಶ್ರೀರಾಮುಲು ಭರ್ಜರಿ ಲಾಬಿ: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶುರುವಾಯ್ತು ಪೈಪೋಟಿ
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಸದ್ಯಕ್ಕೆ ಸದ್ದಿಲ್ಲದೆಯೇ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಮೂರು ವರ್ಷಗಳ ಅಧಿಕಾರಾವಧಿಯು 2026ರ ನವೆಂಬರ್ಗೆ ಕೊನೆಗೊಳ್ಳಲಿದ್ದು, ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಾಜಿ ಸಚಿವ ಬಿ. ಶ್ರೀರಾಮುಲು ಈ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಸಾರಥ್ಯ ವಹಿಸಿಕೊಳ್ಳಲು ಅವರು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಶ್ರೀರಾಮುಲು ಬೇಡಿಕೆಗಳ ಸರಮಾಲೆ ಬಿಜೆಪಿ…
