Big News: ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸಿಎಂ ಬದಲಾವಣೆ, ಹೊಸ ವರ್ಷಕ್ಕೆ ಹೊಸ ಮುಖ: ಬಿಜೆಪಿ ನಾಯಕ ಸುನೀಲ್ ಕುಮಾರ್ ಅಚ್ಚರಿಯ ಹೇಳಿಕೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಪ್ರಮುಖ ನಾಯಕ ಸುನೀಲ್ ಕುಮಾರ್, ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತಾವೈಖರಿಯನ್ನು (Big News) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಕುರಿತು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದೆ. ಹೊಸ ವರ್ಷಕ್ಕೆ ಹೊಸ ಮುಖ್ಯಮಂತ್ರಿ…
