TOP NEWS
supreme court order about acid attack victims

Supreme Court: ಆಸಿಡ್ ದಾಳಿ ಸಂತ್ರಸ್ತರಿಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ಕೊಡುಗೆ

ನವದೆಹಲಿ: ಆಸಿಡ್ ದಾಳಿಗೆ ಒಳಗಾದವರ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ಅತ್ಯಂತ ಮಾನವೀಯ ಮತ್ತು ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಆಸಿಡ್ ದಾಳಿಯಿಂದಾಗಿ ಕೇವಲ ಮುಖ ಅಥವಾ ದೇಹದ ಚರ್ಮ ವಿರೂಪಗೊಂಡವರಿಗೆ ಮಾತ್ರವಲ್ಲದೆ, ಆಂತರಿಕವಾಗಿ ಗಂಭೀರ ಹಾನಿ ಅನುಭವಿಸಿದವರನ್ನೂ ಇನ್ಮುಂದೆ ‘ವಿಕಲಚೇತನರು’ ಎಂದು ಪರಿಗಣಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಬಾಹ್ಯ ಗುರುತಿಲ್ಲದಿದ್ದರೂ ಸಿಗಲಿದೆ ಸೌಲಭ್ಯ ಈವರೆಗಿನ ನಿಯಮಗಳ ಪ್ರಕಾರ, ಆಸಿಡ್ ದಾಳಿಯಿಂದ ಚರ್ಮ ಸುಟ್ಟು ಹೋಗಿದ್ದರೆ ಮಾತ್ರ ಅವರಿಗೆ ವಿಕಲಚೇತನರ ಕಾಯ್ದೆಯಡಿ ಸೌಲಭ್ಯಗಳು ಸಿಗುತ್ತಿದ್ದವು….

Read More
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More
Am I a criminal? Pawan Khera asks as SC

Pawan Khera: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಎಫ್‌ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮಗೆ ನೀಡಲಾಗಿದ್ದ ಸಾರಿಗೆ ನಿಬಂಧಿತ ಜಾಮೀನು (Transit Bail) ಅವಧಿಯನ್ನು ಮಂಗಳವಾರದವರೆಗೆ ವಿಸ್ತರಿಸಬೇಕು ಎಂದು ಖೇರಾ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠವು ಈ ಆದೇಶ ನೀಡಿದ್ದು, ಅಸ್ಸಾಂನ…

Read More

Supreme Court: ಜಾತಿ ಗಣತಿ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ಅರ್ಜಿದಾರರ ಭಾಷೆಗೆ ಸಿಜೆಐ ಗರಂ

ನವದೆಹಲಿ: ದೇಶದಲ್ಲಿ ಮುಂಬರುವ ಜಾತಿ ಗಣತಿಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯಲ್ಲಿ ಬಳಸಿರುವ ಭಾಷೆಯ ಬಗ್ಗೆ ಅರ್ಜಿದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.‌ ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠದ ಮುಂದೆ ಈ ವಿಚಾರದ ಸುದೀರ್ಘ…

Read More
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More
Supreme Court notice to state and central government

Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಏನಿದೆ? ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ…

Read More