TOP NEWS
Bhojshala Dispute SC Directs Madhya Pradesh Govt to Provide Alternative Open Space for Friday Prayers

Bhojshala: ಭೋಜ್‌ಶಾಲಾ ವಿವಾದ: ಶುಕ್ರವಾರದ ನಮಾಜ್‌ಗೆ ಪರ್ಯಾಯ ಜಾಗ ನೀಡಲು ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಭೋಜ್‌ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Bhojshala) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲಾ ಆವರಣದಲ್ಲಿ ಶುಕ್ರವಾರದ ನಮಾಜ್ ಸಲ್ಲಿಸಲು ಪರ್ಯಾಯವಾಗಿ ತೆರೆದ ಜಾಗವನ್ನು ಒದಗಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಎರಡೂ ಕಡೆಯ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು, ಮುಸ್ಲಿಂ ಸಮುದಾಯದ ಅರ್ಜಿದಾರರಿಗೆ ಮಧ್ಯಾಹ್ನ 1:00 ರಿಂದ 3:00 ರವರೆಗೆ ನಮಾಜ್ ಮಾಡಲು ಮುಕ್ತ ಸ್ಥಳಾವಕಾಶ ಕಲ್ಪಿಸಬೇಕು ಮತ್ತು ಇದಕ್ಕೆ ಅಗತ್ಯವಿರುವ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸರ್ಕಾರವೇ…

Read More
Supreme court gives big shock to Mahesh Shetty thimarodi

Mahesh Shetty: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಶಾಕ್: ಗಡಿಪಾರು ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ: ಖ್ಯಾತ ಸಾಮಾಜಿಕ ಹೋರಾಟಗಾರ ಹಾಗೂ ಹಿಂದೂ ಸಂಘಟನೆಯ ನಾಯಕ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರಿಗೆ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಕಾನೂನು ಹಿನ್ನಡೆಯಾಗಿದೆ. ಸಾರ್ವಜನಿಕ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊರಡಿಸಿದ್ದ ಗಡಿಪಾರು ಆದೇಶವನ್ನು ಸವಾಲು ಮಾಡಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು (SLP) ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ…

Read More
supreme court declined plea about ram mandir urgent hearing application for cbi investigation

Supreme Court: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ: ಸಿಬಿಐ ತನಿಖೆ ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಂದ ಕಾಣಿಕೆ ಹಾಗೂ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ, ಕೇಂದ್ರೀಯ ತನಿಖಾ ದಳದಿಂದ (CBI) ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸದ್ಯಕ್ಕೆ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿಲ್ಲ. “ಈ ಪ್ರಕರಣವನ್ನು ತಕ್ಷಣವೇ ವಿಚಾರಣೆ ನಡೆಸದಿದ್ದರೆ ಆಕಾಶವೇನೂ ಉರುಳಿ ಬೀಳುವುದಿಲ್ಲ, ಸದ್ಯಕ್ಕೆ ಇದರಲ್ಲಿ ಅಂತಹ ತುರ್ತು ಏನೆ ಇದೆ?” ಎಂದು ಪ್ರಶ್ನಿಸಿದ ನ್ಯಾಯಾಲಯವು ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಎಂ. ಎಂ….

Read More
Fake website like supreme court CBI raid on 16 state regarding digital arrest

CBI: ಡಿಜಿಟಲ್ ಅರೆಸ್ಟ್ ಹಗರಣದ ವಿರುದ್ಧ ಸಿಬಿಐ ಬಿರುಗಾಳಿ ದಾಳಿ: ‘ಆಪರೇಷನ್ ಚಕ್ರಾ-6’ ಅಡಿ ಕರ್ನಾಟಕ ಸೇರಿ 16 ರಾಜ್ಯಗಳ 80 ಕಡೆ ರೇಡ್

ನವದೆಹಲಿ: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ ಹೋಲುವ ನಕಲಿ ಯುಆರ್‌ಎಲ್ (URL) ಸೃಷ್ಟಿಸಿ, ನೂರಾರು ಜನರನ್ನು ಭೀಕರ ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಕೇಂದ್ರ ತನಿಖಾ ದಳ (CBI) ಯಶಸ್ವಿಯಾಗಿ ಧ್ವಂಸಗೊಳಿಸಿದೆ. ಈ ದೂಳೀಪಟ ಕಾರ್ಯಾಚರಣೆಯ ಭಾಗವಾಗಿ ಸಿಬಿಐ ಅಧಿಕಾರಿಗಳು ದೇಶದ 16 ರಾಜ್ಯಗಳ ಒಟ್ಟು 80 ಪ್ರದೇಶಗಳಲ್ಲಿ ಗುರುವಾರ ಏಕಕಾಲಕ್ಕೆ ಭಾರಿ ದಾಳಿ ನಡೆಸಿದ್ದಾರೆ. ಪಶ್ಚಿಮದ ಪಂಜಾಬ್ ಮತ್ತು ಗುಜರಾತ್‌ನಿಂದ ಹಿಡಿದು ಈಶಾನ್ಯದ ಅಸ್ಸಾಂ ಹಾಗೂ ಮಣಿಪುರದವರೆಗೆ…

Read More
Supreme court to take ram mandir donation issue on June 29th

Supreme Court: ರಾಮ ಮಂದಿರ ನಿಧಿ ಅಕ್ರಮ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿವಾದ; ಸೋಮವಾರ ತುರ್ತು ವಿಚಾರಣೆ ಸಾಧ್ಯತೆ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಸಾರ್ವಜನಿಕರಿಂದ ಸಂಗ್ರಹವಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ದುರುಪಯೋಗ ಹಾಗೂ ಆರ್ಥಿಕ ಅವ್ಯವಹಾರದ ಆರೋಪ ಈಗ ದೇಶದ ಅತ್ಯುನ್ನತ ನ್ಯಾಯಾಲಯದ ಅಂಗಳ ತಲುಪಿದೆ. ಈ ಹಗರಣದ ಬಗ್ಗೆ ತಕ್ಷಣ ಎಫ್‌ಐಆರ್ ದಾಖಲಿಸಿ, ಸಿಬಿಐ ನೇತೃತ್ವದ ತಜ್ಞರ ತಂಡದಿಂದ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಜೂನ್ 29ರ ಸೋಮವಾರದಂದು ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ…

Read More
supreme court declined plea about ram mandir urgent hearing application for cbi investigation

Supreme Court: ಇನ್ಶೂರೆನ್ಸ್ ಕಂಪನಿ ಮತ್ತು ಗ್ರಾಹಕರ ನಡುವೆ ಮೂರನೇ ವ್ಯಕ್ತಿಗೆ ಜಾಗವಿಲ್ಲ: ಸುಪ್ರೀಂ

ನವದೆಹಲಿ: ವಿಮಾ ಪಾಲಿಸಿಗಳಿಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ವಿಮೆ ಎಂಬುದು ಪಾಲಿಸಿದಾರ ಮತ್ತು ವಿಮಾ ಕಂಪನಿಯ ನಡುವೆ ನಡೆಯುವ ತೀರಾ ವೈಯಕ್ತಿಕ ಒಪ್ಪಂದವಾಗಿದ್ದು, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ಹಣಕಾಸು ಸಂಸ್ಥೆಗಳು (ಫೈನಾನ್ಸಿಯರ್) ನಷ್ಟ ಪರಿಹಾರಕ್ಕಾಗಿ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದೆ. ಸುಪ್ರೀಂ ಹೇಳಿದ್ದೇನು? ಲೋನ್…

Read More
Supreme court important order Voluntary Sex Work is Not Illegal

Supreme Court: ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಅಪರಾಧವಲ್ಲ, ಒಪ್ಪಿಗೆಯಿಲ್ಲದೆ ಬಲವಂತದ ಪುನರ್ವಸತಿ ಸಲ್ಲದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ವಯಸ್ಕರು ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಅಥವಾ ಅವರ ಮೇಲೆ ಕ್ರಮ ಜರುಗಿಸಲು ಪೊಲೀಸರಿಗೆ ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅವಲೋಕನ ಮಾಡಿದೆ. ಸುಮಾರು 70 ವರ್ಷಗಳಷ್ಟು ಹಳೆಯದಾದ ಅನೈತಿಕ ಸಂಚಾರ ತಡೆ ಕಾಯ್ದೆಯನ್ನು (ಐಟಿಪಿಎ) ವಿಶ್ಲೇಷಿಸಿದ ನ್ಯಾಯಾಲಯ, ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿ ಮಾಡುವುದು ಕಾನೂನುಬಾಹಿರವಲ್ಲ ಎಂದು ಸ್ಪಷ್ಟಪಡಿಸಿದೆ. ವೇಶ್ಯಾಗೃಹ ನಡೆಸುವುದು ಅಪರಾಧ ಎಂಬುದು ನಿಜವಾದರೂ, ದಾಳಿಯ ಸಂದರ್ಭದಲ್ಲಿ ಸಿಕ್ಕಿಬೀಳುವ ಸ್ವಯಂಪ್ರೇರಿತ ಲೈಂಗಿಕ ಕಾರ್ಯಕರ್ತರನ್ನು ಸಂತ್ರಸ್ತರಂತೆ…

Read More