TOP NEWS
Supreme court gave final time for GBA election

GBA: ಬೆಂಗಳೂರಿನ ಸ್ಥಳೀಯ ಚುನಾವಣೆಗಳಿಗೆ ಸುಪ್ರೀಂ ಕೋರ್ಟ್ ಗಡುವು: ಆಗಸ್ಟ್ 31ರ ಒಳಗೆ ಪ್ರಕ್ರಿಯೆ ಮುಗಿಸಲು ರಾಜ್ಯ ಸರ್ಕಾರಕ್ಕೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಗೆ ಒಳಪಡುವ ಐದೂ ಮಹಾನಗರ ಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್ ಮಹತ್ವದ ದಿನಾಂಕವನ್ನು ನಿಗದಿಪಡಿಸಿದೆ. ಬರುವ ಆಗಸ್ಟ್ 31 ರ ಒಳಗಾಗಿ ಎಲ್ಲಾ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಉನ್ನತ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡಿದೆ. ಚುನಾವಣಾ ಸಿದ್ಧತೆಗಳಿಗಾಗಿ ತಮಗೆ ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಜಂಟಿಯಾಗಿ…

Read More
supreme court mandate tracking device and Speed Governor in transport vehicle

Supreme Court: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ: ಸುಪ್ರೀಂ ಆದೇಶ

ನವದೆಹಲಿ: ಭಾರತದ ರಸ್ತೆಗಳಲ್ಲಿ ‘ಲೇನ್ ಶಿಸ್ತು’ ಎಂಬ ಪರಿಕಲ್ಪನೆಯೇ ಇಲ್ಲದಂತಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು, ದೇಶದಲ್ಲಿ ಸಂಭವಿಸುವ ಬಹುತೇಕ ಅಪಘಾತಗಳಿಗೆ ಲೇನ್ ಶಿಸ್ತು ಪಾಲಿಸದಿರುವುದೇ ಮುಖ್ಯ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿದರೆ ಅಪಘಾತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ನ್ಯಾಯಾಲಯ ಕಿವಿಮಾತು…

Read More
supreme court notice about land dispute case in high courts

Supreme Court: “ಜಾಮೀನು ಅರ್ಜಿಗಳನ್ನು ಬಾಕಿ ಇಡಬೇಡಿ”: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಡೆಡ್‌ಲೈನ್!

ನವದೆಹಲಿ: ದೇಶದ ವಿವಿಧ ಉನ್ನತ ನ್ಯಾಯಾಲಯಗಳಲ್ಲಿ (High Courts) ಲಕ್ಷಾಂತರ ಜಾಮೀನು ಅರ್ಜಿಗಳು ವಿಲೇವಾರಿಯಾಗದೆ ಉಳಿದಿರುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವ್ಯಕ್ತಿಯ ಸ್ವಾತಂತ್ರ್ಯವನ್ನು ಕಾಪಾಡುವುದು ನ್ಯಾಯಾಂಗದ ಮೊದಲ ಆದ್ಯತೆಯಾಗಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲಹಾಬಾದ್ ಮತ್ತು ಪಾಟ್ನಾ ಹೈಕೋರ್ಟ್‌ಗಳ ಸ್ಥಿತಿಗೆ ಕಳವಳ ಸಿಜೆಐ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ವಿಶೇಷವಾಗಿ ಉತ್ತರ ಪ್ರದೇಶ ಮತ್ತು ಬಿಹಾರದ…

Read More
Supreme Court notice to central government regarding Pennai River

Supreme Court: ಪೆನ್ನಾರ್ ನದಿ ವಿವಾದ: ಜಲ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಗಡುವು

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತರರಾಜ್ಯ ಜಲ ನ್ಯಾಯಮಂಡಳಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಆರು ತಿಂಗಳ ಕಾಲಾವಕಾಶ ನೀಡಿದೆ. ಕೇಂದ್ರದ ವಾದಕ್ಕೆ ಮನ್ನಣೆ: ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಮಂಡಳಿ ಸ್ಥಾಪನೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಅನುಮೋದನೆ ಮತ್ತು ಕಾನೂನು ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಇವುಗಳನ್ನು ಪೂರ್ಣಗೊಳಿಸಲು ಸಮಯಾವಕಾಶ ಬೇಕು…

Read More
supreme court surprised after bihar police says rats destroyed evidence

Supreme Court: ಲಂಚದ ನೋಟುಗಳನ್ನು ತಿಂದ ಇಲಿಗಳು!: ಬಿಹಾರ ಪೊಲೀಸರ ವಾದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಾಕ್ಷ್ಯವಾಗಿ ಇರಿಸಲಾಗಿದ್ದ ನಗದು ಹಣವನ್ನು ಇಲಿಗಳು ತಿಂದು ಹಾಕಿವೆ ಎಂಬ ಬಿಹಾರ ಪೊಲೀಸರ ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಅಧಿಕಾರಿ ಅರುಣಾ ಕುಮಾರಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಸಾಕ್ಷ್ಯವೇ ನಾಶ: ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅರುಣಾ ಕುಮಾರಿ ಅವರ ಶಿಕ್ಷೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು…

Read More
supreme court order about acid attack victims

Supreme Court: ಆಸಿಡ್ ದಾಳಿ ಸಂತ್ರಸ್ತರಿಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ಕೊಡುಗೆ

ನವದೆಹಲಿ: ಆಸಿಡ್ ದಾಳಿಗೆ ಒಳಗಾದವರ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ಅತ್ಯಂತ ಮಾನವೀಯ ಮತ್ತು ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಆಸಿಡ್ ದಾಳಿಯಿಂದಾಗಿ ಕೇವಲ ಮುಖ ಅಥವಾ ದೇಹದ ಚರ್ಮ ವಿರೂಪಗೊಂಡವರಿಗೆ ಮಾತ್ರವಲ್ಲದೆ, ಆಂತರಿಕವಾಗಿ ಗಂಭೀರ ಹಾನಿ ಅನುಭವಿಸಿದವರನ್ನೂ ಇನ್ಮುಂದೆ ‘ವಿಕಲಚೇತನರು’ ಎಂದು ಪರಿಗಣಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಬಾಹ್ಯ ಗುರುತಿಲ್ಲದಿದ್ದರೂ ಸಿಗಲಿದೆ ಸೌಲಭ್ಯ ಈವರೆಗಿನ ನಿಯಮಗಳ ಪ್ರಕಾರ, ಆಸಿಡ್ ದಾಳಿಯಿಂದ ಚರ್ಮ ಸುಟ್ಟು ಹೋಗಿದ್ದರೆ ಮಾತ್ರ ಅವರಿಗೆ ವಿಕಲಚೇತನರ ಕಾಯ್ದೆಯಡಿ ಸೌಲಭ್ಯಗಳು ಸಿಗುತ್ತಿದ್ದವು….

Read More
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More