Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು
ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…
