West Bengal: ಭವಾನಿಪುರ ಚುನಾವಣಾ ಫಲಿತಾಂಶ ಇವಿಎಂ ಪಿತೂರಿ; ಕೋರ್ಟ್ ಮೆಟ್ಟಿಲೇರಲು ಮಮತಾ ಬ್ಯಾನರ್ಜಿ ಸಿದ್ಧತೆ, ವಿರೋಧ ಪಕ್ಷಗಳ ಒಕ್ಕೂಟಕ್ಕೆ ಕರೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ವಾರಗಳು ಕಳೆದಿದ್ದರೂ, ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾದ ಅನಿರೀಕ್ಷಿತ ಪರಾಜಯದ ವಿವಾದ ಇನ್ನು ತಣ್ಣಗಾಗಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತ ಚುರುಕುಗೊಳಿಸಿದ್ದರೂ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಈ ಚುನಾವಣಾ ಫಲಿತಾಂಶವನ್ನು ವ್ಯವಸ್ಥಿತ ಆಡಳಿತಾತ್ಮಕ ಪಿತೂರಿ ಎಂದು ಕರೆದಿರುವ ಅವರು, ಈ ರಾಜಕೀಯ ಹೋರಾಟವನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಮುಂದುವರಿಸುವುದಾಗಿ ಪ್ರಕಟಿಸಿದ್ದಾರೆ….
