TOP NEWS
raghava Lawrence to contest in trichy east from TVK

TVK: ಉಪಚುನಾವಣೆ ಕಣಕ್ಕೆ ರಾಘವ ಲಾರೆನ್ಸ್? ಟಿವಿಕೆ ಮುಖ್ಯಸ್ಥ ವಿಜಯ್ ಹೊಸ ರಾಜಕೀಯ ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ವೇಳೆ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳೆರಡರಲ್ಲೂ ಗೆದ್ದು ಬೀಗಿದ್ದ ಮುಖ್ಯಮಂತ್ರಿ ವಿಜಯ್ ಅವರು, ಬಳಿಕ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನವನ್ನು ತೆರವುಗೊಳಿಸಿದರು. ಹೀಗೆ ತೆರವಾಗಿರುವ ಈ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ಎದುರಾಗಲಿದ್ದು, ಇಲ್ಲಿ ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಭ್ಯರ್ಥಿಯಾಗಿ ಖ್ಯಾತ ನಟ ರಾಘವ ಲಾರೆನ್ಸ್ ಅವರನ್ನು ಕಣಕ್ಕಿಳಿಸಲು ವಿಜಯ್ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಗುರು ರಜನಿಕಾಂತ್ ಮಾರ್ಗದರ್ಶನದಲ್ಲಿ ಲಾರೆನ್ಸ್…

Read More
this is what pawan kalyan say about his and vijay comparison

Pawan Kalyan: ವಿಜಯ್ ಸಿಎಂ ಆದದ್ದಕ್ಕೆ ಆಂಧ್ರದಲ್ಲಿ ಜನಾಕ್ರೋಶವೇ? ಜನರ ಹೋಲಿಕೆಗೆ ಪವನ್ ಕಲ್ಯಾಣ್ ಕೊಟ್ಟ ಚಾಟಿ ಏಟು!

ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್‌ ಕಲ್ಯಾಣ್‌ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…

Read More
cm vijay announces Kalaignar Urimai Thogai scheme amount wll get soon

CM Vijay: “ನಮ್ಮದು ಕುದುರೆ ವ್ಯಾಪಾರದ ಸರ್ಕಾರವಲ್ಲ, ಕುದುರೆ ವೇಗದ ಆಡಳಿತ”: ಟೀಕಾಕಾರರಿಗೆ ಸಿಎಂ ವಿಜಯ್ ತಿರುಗೇಟು!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯದ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ‘ಕಲೈಂಜರ್ ಮಹಿಳಾ ಹಕ್ಕು’ ಯೋಜನೆಯ ಅಡಿಯಲ್ಲಿ ಮೇ ತಿಂಗಳ ಕಂತಿನ 1,000 ರೂಪಾಯಿ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ (CM Vijay) ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಗುರುವಾರ ಘೋಷಿಸಿದ್ದಾರೆ. ಈ ಯೋಜನೆಯನ್ನು ಹಿಂದಿನ ಡಿಎಂಕೆ ಸರ್ಕಾರ ಜಾರಿಗೆ ತಂದಿತ್ತಾದರೂ, ಅರ್ಹ ಮಹಿಳೆಯರಿಗೆ ಆರ್ಥಿಕ ನೆರವು ಮುಂದುವರಿಯಲಿದೆ ಎಂದು ಸರ್ಕಾರಿ ಪ್ರಕಟಣೆ ತಿಳಿಸಿದೆ. 2,500 ರೂಪಾಯಿ ಸಹಾಯಧನದ ಭರವಸೆ…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
Vijay walks back appointment of astrologer Rickey Vettrivel as OSD

Vijay: ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕ ಆದೇಶ ಹಿಂದಕ್ಕೆ

ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…

Read More
Vijay tvk party orders not place banner and poster

Vijay: ಜನರಿಗೆ ತೊಂದರೆ ಆಗುವಂತೆ ಪೋಸ್ಟರ್-ಬ್ಯಾನರ್‌ ಹಾಕಬೇಡಿ: ಟಿವಿಕೆ ಕಾರ್ಯಕರ್ತರಿಗೆ ವಿಜಯ್‌ ಆದೇಶ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸೂಪರ್ ಸ್ಟಾರ್ ವಿಜಯ್ (Vijay) ಅವರು ತಮ್ಮ ಆಡಳಿತದ ಮೊದಲ ದಿನವೇ ಜನಪರ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಭಾರಿ ಸಂಚಲನ ಮೂಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆಯಷ್ಟೇ ಶಾಲೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು (ಟಾಸ್ಮಾಕ್) ಮುಚ್ಚುವಂತೆ ಅವರು ಅದೇಶಿಸಿದ್ದಾರೆ. ಸದ್ಯ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ 4,765 ಮದ್ಯದಂಗಡಿಗಳ ಪೈಕಿ ಶಿಕ್ಷಣ ಸಂಸ್ಥೆಗಳು ಮತ್ತು ಜನನಿಬಿಡ ಪ್ರದೇಶಗಳ ಬಳಿಯಿರುವ ಮದ್ಯದಂಗಡಿಗಳನ್ನು ಎರಡು ವಾರಗಳ…

Read More
tamil nadu madras high court gives stay to TVK Tirupattur MLA voting big shock to tvk

Tamil Nadu: ಟಿವಿಕೆಗೆ ಮತ್ತೊಂದು ಶಾಕ್‌, ಶಾಸಕನಿಗೆ ಸದನದಲ್ಲಿ ಮತ ಹಾಕದಂತೆ ಹೈಕೋರ್ಟ್‌ ತಡೆ

ಚೆನ್ನೈ: ತಮಿಳುನಾಡು (Tamil Nadu) ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಮದ್ರಾಸ್ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರು ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ಮಂಗಳವಾರ (ಮೇ 12, 2026) ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಸೂಚನೆಯಂತೆ…

Read More