TVK: ತಮಿಳುನಾಡು ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳಿಗೆ ‘ದಳಪತಿ’ ವಿಜಯ್ ಖಡಕ್ ಸೂಚನೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ರಾಜಕೀಯ ಕಾವು ಏರಿದೆ. ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಜಯದ ನಿರೀಕ್ಷೆಯಲ್ಲಿದ್ದು, ವಿಜಯ್ ಅವರು ತಮ್ಮ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ವಿಜಯ್ ಹೇಳಿದ್ದೇನು? ಚೆನ್ನೈನ ಪಣೈಯೂರ್ನಲ್ಲಿರುವ ಪಕ್ಷದ ಕಚೇರಿಯಲ್ಲಿ 233 ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ವಿಜಯ್, ಮತ ಎಣಿಕೆಯ ದಿನದಂದು ಅನುಸರಿಸಬೇಕಾದ ಕ್ರಮಗಳ…
