Twisha Sharma: ವರದಕ್ಷಿಣೆ ಕಿರುಕುಳ ಮತ್ತು ಸಾವು ಪ್ರಕರಣ: ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಮುಂಗಡ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ಭೋಪಾಲ್: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ತ್ವಿಶಾ ಶರ್ಮಾ (Twisha Sharma) ವರದಕ್ಷಿಣೆ ಕಿರುಕುಳ ಮತ್ತು ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ಭೋಪಾಲ್ ಜಿಲ್ಲೆಯ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಜೂರು ಮಾಡಿದ್ದ ಮುಂಗಡ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮೇ 15 ರಂದು ಭೋಪಾಲ್ನ ಸೆಷನ್ಸ್ ನ್ಯಾಯಾಲಯವು ಎಫ್ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಗಿರಿಬಾಲಾ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿತ್ತು….
