Vande Bharat: ಶಿರಾಡಿಘಾಟ್ನಲ್ಲಿ ವಂದೇ ಭಾರತ್ ಮ್ಯಾಜಿಕ್: ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ಪ್ರಾಯೋಗಿಕ ಸಂಚಾರ ಯಶಸ್ವಿ!
ಹಾಸನ (ಆಗಸ್ಟ್ 12): ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರ ಬಹುಕಾಲದ ನಿರೀಕ್ಷೆ ಸಾಕಾರಗೊಳ್ಳುವ ಕಾಲ ಹತ್ತಿರ ಬಂದಿದೆ. ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್ಪ್ರೆಸ್’ (Vande Bharat) ರೈಲಿನ ಟ್ರಯಲ್ ರನ್ (ಪ್ರಾಯೋಗಿಕ ಸಂಚಾರ) ಹಾಸನ ಜಿಲ್ಲೆಯ ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಿಲ್ದಾಣದವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಡಿದಾದ ಹಾಗೂ ತಿರುವುಗಳಿಂದ ಕೂಡಿದ ಸವಾಲಿನ ಶಿರಾಡಿಘಾಟ್ ಮಾರ್ಗದಲ್ಲಿ ಈ ಸೆಮಿ ಹೈಸ್ಪೀಡ್ ರೈಲು ಯಶಸ್ವಿಯಾಗಿ ಚಲಿಸುವ ಮೂಲಕ ಹೊಸ…
