TOP NEWS
Eggs Hurled at tcm mp Mahua Moitra

TMC: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ವಿರುದ್ಧ ಜನಾಕ್ರೋಶ: ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ದಾಳಿ

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮುಖಂಡರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಇತ್ತೀಚೆಗೆ ನಡೆದ ಎರಡು ಪ್ರತ್ಯೇಕ ಘಟನೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಸಂಸದೆ ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಅಪರಿಚಿತರು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಬುಧವಾರದಂದು ಹೋಟೆಲೊಂದರಲ್ಲಿ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಮುಖ ಸಭೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಸಭೆಯ ಮಧ್ಯೆ ದಿಢೀರನೆ ನುಗ್ಗಿದ ಅಪರಿಚಿತರ ಗುಂಪೊಂದು ಸಂಸದೆಯನ್ನು ಗುರಿಯಾಗಿಸಿಕೊಂಡು ಮೊಟ್ಟೆಗಳನ್ನು…

Read More
Tragedy tea warehouse collapses in Kolkata

Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…

Read More
Imposing vegetarianism TMC slams west Bengal BJp government

West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್‌ ಸಂಸ್ಥೆಗೆ…

Read More
TMC leader Jyotipriya Mallick resigned to party

TMC: ಟಿಎಂಸಿ ಸಂಸ್ಥಾಪಕ ದಿನಗಳ ನಾಯಕ, ಮಮತಾ ಆಪ್ತ ಜ್ಯೋತಿಪ್ರಿಯ ಮಲ್ಲಿಕ್ ಪಕ್ಷಕ್ಕೆ ರಾಜೀನಾಮೆ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಸ್ಥಾಪನೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೆರಳಿನಂತೆ ನಿಂತಿದ್ದ ಹಿರಿಯ ನಾಯಕ ಜ್ಯೋತಿಪ್ರಿಯ ಮಲ್ಲಿಕ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ತೀವ್ರವಾಗಿ ಸಕ್ಕರೆ ಕಾಯಿಲೆ (ಶುಗರ್) ಹೆಚ್ಚಾಗಿರುವ ಕಾರಣ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರಿಗೆ ಬರೆದಿರುವ ಕೈಬರಹದ ಬಂಗಾಳಿ ಪತ್ರದಲ್ಲಿ ಮಲ್ಲಿಕ್ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ಭರ್ಜರಿ…

Read More
West Bengal Suvendu Adhikari Cabinet Expands

West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಪುಟ ವಿಸ್ತರಣೆ: ಸಚಿವರ ಒಟ್ಟು ಸಂಖ್ಯೆ 41ಕ್ಕೆ ಏರಿಕೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ (West Bengal) ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸ್ವಪನ್ ದಾಸ್‌ಗುಪ್ತಾ, ತಪಸ್ ರಾಯ್ ಮತ್ತು ಶಂಕರ್ ಘೋಷ್ ಸೇರಿದಂತೆ ಒಟ್ಟು 35 ಬಿಜೆಪಿ ಶಾಸಕರು ಸೋಮವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೂರು ವಾರಗಳ ನಂತರ ವಿಸ್ತರಣೆ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ…

Read More
West bengal election result mamata banerjee decided to go on court regarding her defeat

West Bengal: ಭವಾನಿಪುರ ಚುನಾವಣಾ ಫಲಿತಾಂಶ ಇವಿಎಂ ಪಿತೂರಿ; ಕೋರ್ಟ್ ಮೆಟ್ಟಿಲೇರಲು ಮಮತಾ ಬ್ಯಾನರ್ಜಿ ಸಿದ್ಧತೆ, ವಿರೋಧ ಪಕ್ಷಗಳ ಒಕ್ಕೂಟಕ್ಕೆ ಕರೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ವಾರಗಳು ಕಳೆದಿದ್ದರೂ, ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾದ ಅನಿರೀಕ್ಷಿತ ಪರಾಜಯದ ವಿವಾದ ಇನ್ನು ತಣ್ಣಗಾಗಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತ ಚುರುಕುಗೊಳಿಸಿದ್ದರೂ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಈ ಚುನಾವಣಾ ಫಲಿತಾಂಶವನ್ನು ವ್ಯವಸ್ಥಿತ ಆಡಳಿತಾತ್ಮಕ ಪಿತೂರಿ ಎಂದು ಕರೆದಿರುವ ಅವರು, ಈ ರಾಜಕೀಯ ಹೋರಾಟವನ್ನು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಮುಂದುವರಿಸುವುದಾಗಿ ಪ್ರಕಟಿಸಿದ್ದಾರೆ….

Read More
tmc lost deposit in west bengal fatta by poll election

West Bengal: ಫಾಲ್ಟಾ ಚುನಾವಣೆಯಲ್ಲಿ ಟಿಎಂಸಿಗೆ ಹೀನಾಯ ಸೋಲು: ಠೇವಣಿ ಕಳೆದುಕೊಂಡ ಮಮತಾ ಪಕ್ಷ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಅತ್ಯಂತ ಪ್ರಭಾವಿ ಕ್ಷೇತ್ರಗಳಲ್ಲೊಂದಾದ ಡೈಮಂಡ್ ಹಾರ್ಬರ್ ವ್ಯಾಪ್ತಿಯ ಫಾಲ್ಟಾ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವು ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಪಾಲಿಗೆ ಭಾರಿ ಮುಖಭಂಗ ತಂದಿಟ್ಟಿದೆ. ಚುನಾವಣಾ ಪ್ರಚಾರದ ವೇಳೆ ತೀವ್ರ ಅಬ್ಬರ ಸೃಷ್ಟಿಸಿದ್ದ ಟಿಎಂಸಿ, ಮತ ಎಣಿಕೆಯ ನಂತರ ಕನಿಷ್ಠ ಪಕ್ಷ ತನ್ನ ಠೇವಣಿಯನ್ನು ಉಳಿಸಿಕೊಳ್ಳಲಾಗದೆ ಭೀಕರ ಸೋಲನ್ನು ಅನುಭವಿಸಿದೆ. ಎಲ್ಲಿಯೂ ಕಾಣಿಸಿಕೊಳ್ಳದ ಅಭಿಷೇಕ್‌ ಬ್ಯಾನರ್ಜಿ ವಾಸ್ತವವಾಗಿ, ಚುನಾವಣಾ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಟಿಎಂಸಿ ಈ ಕ್ಷೇತ್ರದಲ್ಲಿ ಸೋಲೊಪ್ಪಿಕೊಂಡ…

Read More