Yogi Adityanath: ಉತ್ತರ ಪ್ರದೇಶದಲ್ಲಿ ಮತ್ತೊಂದು ನಗರದ ಹೆಸರು ಬದಲಾವಣೆ: ಜಲಾಲಾಬಾದ್ ಇನ್ಮುಂದೆ ‘ಪರಶುರಾಮಪುರಿ’
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ನೇತೃತ್ವದ ಸರ್ಕಾರವು ಮತ್ತೊಂದು ಮಹತ್ವದ ಹೆಸರು ಬದಲಾವಣೆಯ ತೀರ್ಮಾನ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಷಹಜಹಾನ್ಪುರ ಜಿಲ್ಲೆಯ ಪ್ರಮುಖ ಪಟ್ಟಣವಾದ ಜಲಾಲಾಬಾದ್ ಹೆಸರನ್ನು ಅಧಿಕೃತವಾಗಿ ‘ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ. ಈ ಐತಿಹಾಸಿಕ ತೀರ್ಮಾನದ ಮೂಲಕ ಈ ಪ್ರಾಚೀನ ಪಟ್ಟಣಕ್ಕೆ ಹೊಸ ಸಾಂಸ್ಕೃತಿಕ ಹಾಗೂ ಧಾರ್ಮಿಕ ಗುರುತು ಸಿಕ್ಕಂತಾಗಿದೆ. ಸ್ಥಳದ ಹಿನ್ನಲೆ ಏನು? ಪೌರಾಣಿಕ ಹಿನ್ನೆಲೆಯ ಪ್ರಕಾರ, ಈ ಜಲಾಲಾಬಾದ್ ಪ್ರದೇಶವು…
